ಪ್ರಯಾಗರಾಜ್ (ಉತ್ತರ ಪ್ರದೇಶ), ಡಿಸೆಂಬರ್ 29 (ಪಿಟಿಐ): ಆಡಳಿತಾತ್ಮಕ ವ್ಯವಸ್ಥೆಯಲ್ಲಿನ ಗೊಂದಲದಿಂದಾಗಿ ರಿಟ್ ಕೋರ್ಟ್ ಆದೇಶವನ್ನು ಪಾಲಿಸದಿದ್ದರೆ, ಸಂಬಂಧಿತ ಸರ್ಕಾರಿ ಇಲಾಖೆಯ ಉನ್ನತಾಧಿಕಾರಿಯೇ ಅವಮಾನ ಪ್ರಕರಣಕ್ಕೆ ಹೊಣೆಗಾರರಾಗುತ್ತಾರೆ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ.
ಭೂಸ್ವಾಧೀನ ಕಾಯ್ದೆ, 1984 ಹಾಗೂ 2013ರ ಹೊಸ ಭೂಸ್ವಾಧೀನ ಕಾಯ್ದೆಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಉತ್ತರ ಪ್ರದೇಶದ ಮುಖ್ಯ ಕಾರ್ಯದರ್ಶಿಯೇ ಹೊಣೆಗಾರರು ಎಂದು ಕೋರ್ಟ್ ಸ್ಪಷ್ಟಪಡಿಸಿದೆ. ಇಲಾಖೆಗಳ ನಡುವೆ ಕೆಲಸ ಹಂಚಿಕೆಯನ್ನು ಕೋರ್ಟ್ ಆದೇಶ ಪಾಲನೆ ಮಾಡದಿರುವ ನೆಪವಾಗಿ ಬಳಸಲಾಗದು ಎಂದು ತಿಳಿಸಿದೆ.
ನ್ಯಾಯಮೂರ್ತಿ ಸಲೀಲ್ ಕುಮಾರ್ ರೈ ಅವರು, ಈ ಕೋರ್ಟ್ ನೀಡಿರುವ ಆದೇಶದ ಸಂಪೂರ್ಣ ಅನುಷ್ಠಾನವನ್ನು ಖಚಿತಪಡಿಸುವುದು ರಾಜ್ಯ ಸರ್ಕಾರದ ಕರ್ತವ್ಯ ಎಂದು ಹೇಳಿದರು.

